ಮಂತ್ರ ಮಾಂಗಲ್ಯದ ಮೂಲಕ ಅಂತರ್ಜಾತಿ ವಿವಾಹ

ದನಗಳ ಅಕ್ರಮ ಸಾಗಾಟ ಪತ್ತೆ

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಗೆ ಹೊರಟ ಕಾರ್ಯಕರ್ತರು

ಸೆಪ್ಟೆಂಬರ್‌ಗೆ ಪ್ರಾದೇಶಿಕ ಅಸಮತೋಲನಾ ನಿವಾರಣಾ ಸಮಿತಿ ವರದಿ

April 19, 2025

Ctv News Kannada

Chikkaballapura

ಓಡಿಹೋಗಿ ಮದುವೆಯಾದ ಪ್ರೇಮಿಗಳು – ಯುವಕನ ಪೋಷಕರ ಮೇಲೆ ಯುವತಿ ಕಡೆಯವರಿಂದ ಹಲ್ಲೆ

1 min read

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ದಪ್ಪರ್ತಿ ಗ್ರಾಮದ ಮನೋಜ್ ಹಾಗೂ ಅಂಕಿತಾ ಇಬ್ಬರು ಪರಸ್ಪರ ಪ್ರೀತಿಸಿ ಮನೆ ಬಿಟ್ಟು ಓಡಿ ಹೋಗಿ ಭಾನುವಾರ ಮದುವೆಯಾಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಅಂಕಿತಾ ಕುಟುಂಬಸ್ಥರು ಇಂದು ಯುವಕನ ತಂದೆ-ತಾಯಿ ಮನೆ ಮೇಲೆ ದಾಳಿ ನಡೆಸಿ ತಾಯಿ ವೆಂಕಟಲಕ್ಷ್ಮಮ್ಮ ಹಾಗೂ ತಂದೆ ಗಂಗರಾಜು ಮೇಲೆ ನಡುರಸ್ತೆಯಲ್ಲೇ ಮನಸ್ಸೋಯಿಚ್ಛೆ ಹಲ್ಲೆ (ದಾಳಿ).

ಪ್ರೀತಿಸಿ ಪರಾರಿಯಾಗಿದ್ದ ಪ್ರೇಮಿಯ ಪೋಷಕರ ಮೇಲೆ ಮಾರಣಾಂತಿಕ ಹಲ್ಲೆ..

ಪ್ರೇಮಿಯ ತಂದೆ ತಾಯಿ ಮೇಲೆ ನಡು ರಸ್ತೆಯಲ್ಲೇ ಮನಸೋ ಇಚ್ಚೆ ಹಲ್ಲೆ..

ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕು ದಪ್ಪರ್ತಿ ಗ್ರಾಮದಲ್ಲಿ ಘಟನೆ..

ಬೆಳಗಾವಿಯಲ್ಲಿ ಮಹಿಳೆಗೆ ವಿವಸ್ತ್ರಗೊಳಿಸದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ..

ನೆನ್ನೆ ಮನೋಜ್ ಹಾಗೂ ಅಂಕಿತಾ ಪರಸ್ಪರ ಪ್ರೀತಿಸಿ ಪರಾರಿಯಾಗಿದ್ರು..

ಅಂಕಿತಾ ಪೋಷಕರಿಗೆ ಇವರ ಪ್ರೀತಿಗೆ ವಿರೋಧ ಇತ್ತಂತೆ..

ಅಂಕಿತಾ ಪೋಷಕರಾದ ಶ್ರೀನಿವಾಸ್, ಸೇರಿದಂತೆ ಕುಟುಂಬ ಸದಸ್ಯರಿಂದ ಮನೋಜ್ ಕುಮಾರ್ ತಂದೆ ತಾಯಿ ಮೇಲೆ ಮಾರಣಾಂತಿಕ ಹಲ್ಲೆ ..

ಮನೋಜ್ ತಾಯಿ ವೆಂಕಟಲಕ್ಷಮ್ಮ ಹಾಗೂ ತಂದೆ ಗಂಗರಾಜು ಮೇಲೆ ಹಲ್ಲೆ..

ಗಂಭೀರವಾಗಿ ಗಾಯಗೊಂಡಿರುವ ವೆಂಕಟಲಕ್ಷ್ಮಮ್ಮ ಹಾಗೂ ಗಂಗರಾಜು..
ಗಾಯಾಳುಗಳನ್ನ ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ ದಾಖಲು..

ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ..

About The Author

Leave a Reply

Your email address will not be published. Required fields are marked *