ಮಂತ್ರ ಮಾಂಗಲ್ಯದ ಮೂಲಕ ಅಂತರ್ಜಾತಿ ವಿವಾಹ

ದನಗಳ ಅಕ್ರಮ ಸಾಗಾಟ ಪತ್ತೆ

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಗೆ ಹೊರಟ ಕಾರ್ಯಕರ್ತರು

ಸೆಪ್ಟೆಂಬರ್‌ಗೆ ಪ್ರಾದೇಶಿಕ ಅಸಮತೋಲನಾ ನಿವಾರಣಾ ಸಮಿತಿ ವರದಿ

April 19, 2025

Ctv News Kannada

Chikkaballapura

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕೃಷ್ಣ ಮಾಲೂರು ತಾಲ್ಲೂಕಿನಲ್ಲಿ ಘಟನೆ

1 min read

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕೃಷ್ಣ

ಗ್ರಾಮ ಪಂಚಾಯ್ತಿ ಸಹಾಯಕ ನಾಗರಾಜ್ ಮಗ ಆತ್ಮಹತ್ಯೆ

ಚೊಕ್ಕಡಹಳ್ಳಿ ಗ್ರಾಮದಲ್ಲಿ ಸೈಟಿನ ವಿಚಾರದಲ್ಲಿ ರಾತ್ರಿ ಗಲಾಟೆ ನಡೆದಿದ್ದು, ಗಲಾಟೆ ಹಿನ್ನೆಲೆಯಲ್ಲಿ  ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿ ಬರುತ್ತಿದೆ, ಎರಡು ವರ್ಷಗಳಿಂದ ಗ್ರಾಮ ಪಂಚಾಯ್ತಿಯಲ್ಲಿ   ಸಹಾಯಕರಾಗಿ ಕೆಲಸ ಮಾಡುತ್ತಿದ್ದ ತಂದೆ  ನಾಗರಾಜ್ ಅನಾರೋಗ್ಯದ ಕಾರಣ  ಅವರ ಪರವಾಗಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ, ಸ್ಥಳದಲ್ಲಿ ಸಂಬಂಧಿಕರಿಂದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮೇಲಾಧಿಕಾರಿಗಳು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು.  ತಾಲ್ಲೂಕು ಪಂಚಾಯಿತಿ ಇಒ  ಕೃಷ್ಣಪ್ಪ, ಪಿಡಿಒ ದೀಪ, ಸ್ಥಳಕ್ಕೆ ಮಾಲೂರು ಪೋಲಿಸ್ ಇನ್ಸ್ ಪೆಕ್ಟರ್ ವಸಂತ್, ಅಪರಾಧ ಇನ್ಸ್ ಪೆಕ್ಟರ್ ವರಲಕ್ಷ್ಮೀ , ಎ.ಎಸ್.ಐ ಮುನೇಗೌಡ ಬೇಟಿ ನೀಡಿ  ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾಲೂರು ತಾಲ್ಲೂಕಿನ ಮಡಿವಾಳ ಗ್ರಾಮ ಪಂಚಾಯ್ತಿಯಲ್ಲಿ ಘಟನೆ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಚೊಕ್ಕಡಹಳ್ಳಿ ಗ್ರಾಮದ 24 ವರ್ಷದ ಕೃಷ್ಣ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಈತ ಗ್ರಾಮ ಪಂಚಾಯಿತಿ ಸಹಾಯಕ ನಾಗರಾಜ್ ಅವರ ಮಗ ಎಂದು ಗುರ್ತಿಸಲಾಗಿದೆ.

ಚೊಕ್ಕಡಹಳ್ಳಿ ಗ್ರಾಮದ ನಿವೇಶನವೊಂದರ ವಿಚಾರದಲ್ಲಿ ಗ್ರಾಮದಲ್ಲಿ ಗಲಾಟೆ ನಡೆದಿತ್ತು ಎನ್ನಲಾಗಿದೆ. ಕಂದಾಯ ಇಲಾಖೆ, ಪೋಲಿಸ್, ಗ್ರಾಮ ಪಂಚಾಯ್ತಿಯವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿ ಬಂದಿದೆ.

ಎರಡು ವರ್ಷಗಳಿಂದ ಗ್ರಾಮ ಪಂಚಾಯ್ತಿಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಮೃತನ ತಂದೆ ನಾಗರಾಜ್ ಅನಾರೋಗ್ಯದ ಕಾರಣ ಅವರ ಪರವಾಗಿ ಪಂಚಾಯಿತಿಯಲ್ಲಿ ಸಹಾಯಕನಾಗಿ ಕೃಷ್ಣ ಕೆಲಸ ಮಾಡುತ್ತಿದ್ದ.

ಸ್ಥಳದಲ್ಲಿ ಸಂಬಂಧಿಕರಿಂದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಮೇಲಾಧಿಕಾರಿಗಳು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದಿದ್ದಾರೆ.

ಮಾಲೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

About The Author

Leave a Reply

Your email address will not be published. Required fields are marked *