ಶಿಡ್ಲಘಟ್ಟದಲ್ಲಿ ಅಂಬೇಡ್ಕರ್ ಭವನಕ್ಕೆ ಭೂಮಿ ಪೂಜೆ

ನಂಜನಗೂಡಿನಲ್ಲಿ ಅಂಬೇಡ್ಕರ್ ೧೩೪ನೇ ಜಯಂತಿ

ಮಂಚೇನಹಳ್ಳಿಯಲ್ಲಿ ಅಂಬೇಡ್ಕರ್ ಜಯಂತಿ

ಸಾಮೂಹಿಕ ಶೌಚಾಲಯಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ

April 15, 2025

Ctv News Kannada

Chikkaballapura

ಮಹಿಳೆ ಗರ್ಭಕೋಶದಲ್ಲಿ 4.5 ಕೆ.ಜಿ ಗೆಡ್ಡೆ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿದ ಸರ್ಕಾರಿ ಆಸ್ಪತ್ರೆ ವೈದ್ಯರು

1 min read

ಮಹಿಳೆಯೊಬ್ಬರ ಗರ್ಭಕೋಶದ ಸುತ್ತ ಬೆಳೆದಿದ್ದ ಬೃಹತ್ ಗಾತ್ರದ ಗೆಡ್ಡೆ ಹೊರ ತೆಗೆಯುವಲ್ಲಿ ಯಶಸ್ವಿಯಾಗಿರುವ ದೊಡ್ಡಬಳ್ಳಾಪುರದ ತಾಯಿ-ಮಗು ಸರ್ಕಾರಿ ಆಸ್ಪತ್ರೆ ವೈದ್ಯರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶಿಲ್ಪಾ (35) ಎಂಬವರು ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಗೆ ಹೊಟ್ಟೆನೋವು, ಸುಸ್ತು ಎಂದು ಮಹಿಳೆ ದಾಖಲಾಗಿದ್ದರು. ವೈದ್ಯರು ಮಹಿಳೆಯನ್ನು ಪರೀಕ್ಷಿಸಿದಾಗ ಹೊಟ್ಟಿಯಲ್ಲಿ ೪ ರಿಂದ ೫ ಕೆ.ಜಿ ತೂಕದ ದೊಡ್ಡ ಗಾತ್ರದ ಗೆಡ್ಡೆ ಇರುವುದು ಪತ್ತೆಯಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪ್ರಸೂತಿ ಸ್ತ್ರಿರೋಗ ತಜ್ಞೆ ಡಾ.ಅರ್ಚನಾ ಕೆ.ಎಲ್ ನೇತೃತ್ವದ ವೈದ್ಯರ ತಂಡ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ವೈದ್ಯೆ ಡಾ.ಅರ್ಚನಾ ಕೆ.ಎಲ್ ಮಾತನಾಡಿ, ಸಾಮಾನ್ಯವಾಗಿ ಮಹಿಳೆಯರ ಗರ್ಭಕೋಶ, ಅಂಡಾಶಯಗಳಲ್ಲಿ ಗೆಡ್ಡೆ ೧೦೦ಕ್ಕೆ ೧೦ ಮಂದಿಯಲ್ಲಿ ಬಹಳ ಸಣ್ಣಪುಟ್ಟದಾಗಿ ಕಂಡುಬರುತ್ತದೆ. ಆದರೆ ಅಚ್ಚರಿ ಎಂಬAತೆ ಈ ಮಹಿಳೆ ಹೊಟ್ಟೆಯಲ್ಲಿ 4 ರಿಂದ5 ಕೆಜಿ ಗೆಡ್ಡೆ ಪತ್ತೆಯಾಗಿದೆ. ಮಹಿಳೆ ಒಂದೆರಡು ದಿನ ತಡವಾಗಿ ಬಂದಿದ್ರೆ ಆಕೆಯ ಜೀವಕ್ಕೆ ಹಾನಿಯಾಗುತ್ತಿತ್ತು. ಸದ್ಯ ಗರ್ಭಕೋಶದ ಸುತ್ತ ಬೆಳೆದಿದ್ದ ದೊಡ್ಡ ಗಾತ್ರದ ಗೆಡ್ಡೆ ಹೊರತೆಗೆಯಲಾಗಿದ್ದು, ಮಹಿಳೆ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಶಸ್ತ್ರಚಿಕತ್ಸೆ ತಂಡದ ಭಾಗವಾಗಿದ್ದ ಡಾ.ಪ್ರೇಮಲತಾ ಮಾತನಾಡಿ, ಇದೊಂದು ಗಂಭೀರ ಮತ್ತು ವೈದ್ಯರಿಗೆ ಸವಾಲದ ಪ್ರಕರಣವಾಗಿತ್ತು. ಅನಸ್ತೇಷಿಯಾ ನೀಡುವ ಮುನ್ನಾ ಬಿ.ಪಿ, ಉಸಿರಾಟದ ಸಮಸ್ಯೆಗಳನ್ನು ನಿಯಂತ್ರಣಕ್ಕೆ ಪಡೆದು ಬಳಿಕ ಆಪರೇಷನ್ ಆರಂಭಿಸಿದೆವು. ರಕ್ತದ ಅಗತ್ಯತೆ ಹೆಚ್ಚು ಇದ್ದಿದ್ದರಿಂದ ಮುಂಚಿತವಾಗಿಯೇ ೪ ಬಾಟಲ್ ಗಳಷ್ಟು ರಕ್ತ ತರೆಸಿಕೊಂಡಿದ್ದೇವು. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದರು.

ಶಸ್ತ್ರಚಿಕಿತ್ಸೆಯಲ್ಲಿ ಪ್ರಸೂತಿ ಸ್ತ್ರಿರೋಗ ತಜ್ಞೆ ಅರ್ಚನಾ ಕೆ.ಎಲ್ ಜೊತೆಗೆ ವೈದ್ಯರಾದ ಡಾ.ಗಿರೀಶ್, ಡಾ.ಪ್ರೇಮಲತಾ, ನರ್ಸ್ ಗಾಯತ್ರಿ, ನಂದಿನಿ, ಭವ್ಯ, ರಾಜು ತಂಡ ಕೈಜೋಡಿಸಿದ್ದರು.

About The Author

Leave a Reply

Your email address will not be published. Required fields are marked *