ಪುರಾತನ ಧರ‍್ಮಿಕ ಸಂಸ್ಕೃತಿ ಪಾಲಿಸಿದರೆ ಮನಶ್ಸಾಂತಿ

ಆಸ್ತಿ ವಿವಾದ ಹಿನ್ನಲೆ ಒಂದೆ ಕುಟುಂಬದವರ ಜಟಾಪಟಿ

ಶ್ರೀದುರ್ಗಾಪರಮೇಶ್ವರಿ ದೇವಿ ವಿಗ್ರಹ ಪ್ರತಿಷ್ಠಾಪನೆ

ಏಕಾಏಕಿ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ

April 20, 2025

Ctv News Kannada

Chikkaballapura

ಕೆಆರ್‌ಎಸ್ ತಾಲೂಕು ಘಟಕದ ಕಚೇರಿ ಉದ್ಘಾಟನೆ

1 min read

ಕೆಆರ್‌ಎಸ್ ತಾಲೂಕು ಘಟಕದ ಕಚೇರಿ ಉದ್ಘಾಟನೆ

ಬೆಂಗಳೂರು ಗ್ರಾಮಾಂತರ ಕಚೇರಿಗೆ ಚಾಲನೆ

ಕರ್ನಾಟಕ ರಾಷ್ಟ ಸಮಿತಿ ಭ್ರಷ್ಟಾಚಾರ ನಿರ್ಮೂಲನೆಗಾಗಿ ಶ್ರಮಿಸುವುದಲ್ಲದೆ ನಾಡು-ನುಡಿ ಭಾಷೆ ಜಲದ ವಿಚಾರಗಳಲ್ಲಿ ಹೋರಾಟಕ್ಕೆ ಸದಾ ಸಿದ್ಧ, ರವಿಕೃಷ್ಣ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಹೋರಾಟ ನಿರಂತರವಾಗಿ ಸಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ ಶಿವಶಂಕರ್ ಹೇಳಿದರು.

ಕೆಆರ್‌ಎಸ್ ದೊಡ್ಡಬಳ್ಳಾಪುರ ತಾಲೂಕು ಘಟಕದ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವಶಂಕರ್, ಕೆಆರ್‌ಎಸ್ ಸೇನಾನಿಗಳ ಸಹಾಯದೊಂದಿಗೆ ತಾಲೂಕಿನಲ್ಲಿ ಕಚೇರಿ ಪ್ರಾರಂಭಿಸಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಪಕ್ಷದ ನೂತನ ಕಚೇರಿ ಪ್ರಾರಂಭಿಸಿದ್ದು, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಭ್ರಷ್ಟಾಚಾರದ ವಿರುದ್ಧ ಹೋರಾಟ ಸದಾ ಜೀವಂತವಾಗಿರುತ್ತದೆ. ಕಚೇರಿ ಸ್ಥಾಪಿಸಿದ ಮುಖ್ಯ ಉದ್ದೇಶ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿದೆ, ಇದನ್ನು ಅರಿತು ನಮ್ಮ ಪಕ್ಷದ ಪದಾಧಿಕಾರಿಗಳು ನಿಷ್ಠೆಯಿಂದ ಸಾರ್ವಜನಿಕರಿಗೆ ಸ್ಪಂದಿಸಬೇಕಾಗಿದೆ ಎಂದರು.

 

About The Author

Leave a Reply

Your email address will not be published. Required fields are marked *