ಮಂತ್ರ ಮಾಂಗಲ್ಯದ ಮೂಲಕ ಅಂತರ್ಜಾತಿ ವಿವಾಹ

ದನಗಳ ಅಕ್ರಮ ಸಾಗಾಟ ಪತ್ತೆ

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಗೆ ಹೊರಟ ಕಾರ್ಯಕರ್ತರು

ಸೆಪ್ಟೆಂಬರ್‌ಗೆ ಪ್ರಾದೇಶಿಕ ಅಸಮತೋಲನಾ ನಿವಾರಣಾ ಸಮಿತಿ ವರದಿ

April 19, 2025

Ctv News Kannada

Chikkaballapura

ಕಲ್ಲೂರು ಗ್ರಾಮದ ಕೆರೆ ಒತ್ತುವರಿ ತೆರವು

1 min read

ಕಲ್ಲೂರು ಗ್ರಾಮದ ಕೆರೆ ಒತ್ತುವರಿ ತೆರವು

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕಲ್ಲೂರು

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ಕಲ್ಲೂರು ಗ್ರಾಮದ ಕೆರೆ ಒತ್ತುವರಿ ತೆರವು ಗೊಳಿಸಲಾಯಿತು. ಈ ವೇಳೆ ಮಾತನಾಡಿದ ತಹಶೀಲ್ದಾರ್ ಸುಧೀಂದ್ರ, ಲೋಕಾಯುಕ್ತ ನಿರ್ದೇಶನದಂತೆ ಕೆರೆ ಒತ್ತುವರಿ ತೆರವುಗೊಳಿಸಲಾಗುತ್ತಿದೆ ಎಂದರು.

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ಕಲ್ಲೂರು ಗ್ರಾಮದ ಕೆರೆ ಒತ್ತುವರಿ ತೆರವು ಗೊಳಿಸಲಾಯಿತು. ಈ ವೇಳೆ ತಹಸೀಲ್ದಾರ್ ಸುಧೀಂದ್ರ ಮಾತನಾಡಿ, ರೈತರಿಗೆ ತೊಂದರೆ ಮಾಡುವ ಉದ್ದೇಶ ಇಲ್ಲ. ಆದರೆ ಕೆರೆ ಒತ್ತುವರಿ ವಿಚಾರಕ್ಕೆ ಸಂಬ0ಧಿಸಿ ಹಲವು ಬಾರಿ ರೈತರಿಗೆ ಸೂಚನೆ ನೀಡಿದ್ದರೂ ಪದೇ ಪದೇ ಮುಂದುವರಿಸುತ್ತಿರುವ ಕಾರಣ ಒತ್ತುವರಿ ತೆರವಗೊಳಿಸಲಾಗುತ್ತಿದೆ ಎಂದರು.

ಇದೇ ರೀತಿ ತಾಲ್ಲೂಕಿನಾದ್ಯಂತ ಎಲ್ಲಾ ಕೆರೆಗಳನು ಸರ್ವೇ ಮಾಡಿ, ಒತ್ತುವರಿ ತೆರವುಗೊಳಿಸಲಾಗುತ್ತದೆ. ಯಾವುದೇ ರೈತರು ಕೆರೆಗಳನ್ನು ಅತಿಕ್ರಮಣವಾಗಿ ಪ್ರವೇಶ ಮಾಡಿ ಬೆಳೆಗಳನ್ನು ಬೆಳೆದಿದ್ದರೆ ಕೂಡಲೇ ತಾವೇ ಒತ್ತುವರಿ ತೆರವುಗೊಳಿಸಬೇಕು. ಒಂದು ವೇಳೆ ನಾವು ತೆರವುಗೊಳಿಸಲು ಬಂದ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಕಾಲಾವಕಾಶ ನೀಡುವುದಿಲ್ಲ. ಕೆರೆಗಳನ್ನು ಉಳಿಸುವಲ್ಲಿ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

About The Author

Leave a Reply

Your email address will not be published. Required fields are marked *