ಮಂತ್ರ ಮಾಂಗಲ್ಯದ ಮೂಲಕ ಅಂತರ್ಜಾತಿ ವಿವಾಹ

ದನಗಳ ಅಕ್ರಮ ಸಾಗಾಟ ಪತ್ತೆ

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಗೆ ಹೊರಟ ಕಾರ್ಯಕರ್ತರು

ಸೆಪ್ಟೆಂಬರ್‌ಗೆ ಪ್ರಾದೇಶಿಕ ಅಸಮತೋಲನಾ ನಿವಾರಣಾ ಸಮಿತಿ ವರದಿ

April 19, 2025

Ctv News Kannada

Chikkaballapura

ಶಿಡ್ಲಘಟ್ಟ ನಲ್ಲಿಮರದಹಳ್ಳಿ ಡೇರಿ ಅಧ್ಯಕ್ಷರಾಗಿ ಮಂಜುನಾಥ್

1 min read

ಶಿಡ್ಲಘಟ್ಟ ನಲ್ಲಿಮರದಹಳ್ಳಿ ಡೇರಿ ಅಧ್ಯಕ್ಷರಾಗಿ ಮಂಜುನಾಥ್

ಉಪಾಧ್ಯಕ್ಷೆಯಾಗಿ ಅಕ್ಕಾಯಮ್ಮ ಅವಿರೋಧ ಆಯ್ಕೆ

ಶಿಡ್ಲಘಟ್ಟ ನಗರದ ನಲ್ಲಿಮರದಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ವಿ. ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಅಕ್ಕಾಯಮ್ಮ ಅವಿರೋಧವಾಗಿ ಆಯ್ಕೆಯಾದರು.

ಶಿಡ್ಲಘಟ್ಟ ನಗರದ ನಲ್ಲಿಮರದಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ವಿ. ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಅಕ್ಕಾಯಮ್ಮ ಅವಿರೋಧವಾಗಿ ಆಯ್ಕೆಯಾದರು. ಸಂಘದ ಕಚೇರಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ವಿ.ಮಂಜುನಾಥ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅಕ್ಕಾಯಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದು, ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಹಕಾರ ಇಲಾಖೆಯ ಮಂಜುನಾಥ್ ಇವರಿಬ್ಬರ ಅವಿರೋಧ ಆಯ್ಕೆ ಘೋಷಿಸಿದರು.

ನೂತನ ಅಧ್ಯಕ್ಷ, ಉಪಾಧ್ಯಕ್ಷೆಯನ್ನು ನಿರ್ದೇಶಕರು, ಹಾಲು ಉತ್ಪಾದಕರು ಹಾಗೂ ಅವರ ಬೆಂಬಲಿಗರು ಹೂ ಹಾರ ಹಾಕಿ ಅಭಿನಂದಿಸಿ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ನಿರ್ದೇಶಕರಾದ ಡಾಲ್ಫಿನ್ ನಾಗರಾಜ್, ಎನ್, ಸಿ, ನರಸಿಂಹಮೂರ್ತಿ, ಎಂ.ಮುರಳಿ, ಕೃಷ್ಣ, ಸುಬ್ರಮಣಿ, ಗಂಗರಾಜ್, ಎಸ್.ಮಂಜುನಾಥ್, ಲಕ್ಷಮ್ಮ, ಮುರಳಿ ಇದ್ದರು.

About The Author

Leave a Reply

Your email address will not be published. Required fields are marked *