ಮಂತ್ರ ಮಾಂಗಲ್ಯದ ಮೂಲಕ ಅಂತರ್ಜಾತಿ ವಿವಾಹ

ದನಗಳ ಅಕ್ರಮ ಸಾಗಾಟ ಪತ್ತೆ

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಗೆ ಹೊರಟ ಕಾರ್ಯಕರ್ತರು

ಸೆಪ್ಟೆಂಬರ್‌ಗೆ ಪ್ರಾದೇಶಿಕ ಅಸಮತೋಲನಾ ನಿವಾರಣಾ ಸಮಿತಿ ವರದಿ

April 19, 2025

Ctv News Kannada

Chikkaballapura

ತೆಲಂಗಾಣ ನೂತನ ಸಿಎಂ ಆಗಿ ‘ರೇವಂತ್ ರೆಡ್ಡಿ’ ಆಯ್ಕೆ, ಡಿಸೆಂಬರ್ 7ಕ್ಕೆ ಪ್ರಮಾಣ ವಚನ

1 min read

ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷವನ್ನ ಗೆಲುವಿನತ್ತ ಮುನ್ನಡೆಸಿದ ನಂತರ ರೇವಂತ್ ರೆಡ್ಡಿ ಅವರು ರಾಜ್ಯದ ಹೊಸ ಮುಖ್ಯಮಂತ್ರಿಯಾಗಲು ಸಜ್ಜಾಗಿದ್ದಾರೆ. ಅದ್ರಂತೆ, ಡಿಸೆಂಬರ್ 7 ರಂದು ಕೆಲವು ಸಚಿವರೊಂದಿಗೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳನ್ನ ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಹೈದರಾಬಾದ್ನಲ್ಲಿ ನಡೆದ ಸಿಎಲ್ಪಿ ಸಭೆಯಲ್ಲಿ ಸರ್ವಾನುಮತದ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಸಿಎಂ ನೇಮಕದ ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್ಗೆ ಬಿಡಲಾಗಿದೆ.

ಮಹತ್ವದ ರಾಜಕೀಯ ತಿರುವಿನಲ್ಲಿ, ತೆಲಂಗಾಣದಲ್ಲಿ ಕಾಂಗ್ರೆಸ್ ವಿಜಯಶಾಲಿಯಾಗಿ ಹೊರಹೊಮ್ಮಿತು, ದಕ್ಷಿಣ ಭಾರತದ ಮೂರು ರಾಜ್ಯಗಳಲ್ಲಿ ಸ್ವತಂತ್ರವಾಗಿ ಅಥವಾ ಮೈತ್ರಿಗಳ ಮೂಲಕ ಅಧಿಕಾರದಲ್ಲಿ ತನ್ನ ಅಸ್ತಿತ್ವವನ್ನ ಗುರುತಿಸಿತು.

ಕಾಂಗ್ರೆಸ್ ಈ ಬಾರಿ ಉತ್ತರ ಭಾರತದಲ್ಲಿ ಸರಣಿ ಚುನಾವಣಾ ಹಿನ್ನಡೆಗಳಿಗೆ ಸಾಕ್ಷಿಯಾಗಿದ್ದು, ದಕ್ಷಿಣ ರಾಜ್ಯದಲ್ಲಿನ ಗೆಲುವು ವಿಶೇಷವಾಗಿ ಗಮನಾರ್ಹವಾಗಿದೆ.

About The Author

Leave a Reply

Your email address will not be published. Required fields are marked *