ಮಂತ್ರ ಮಾಂಗಲ್ಯದ ಮೂಲಕ ಅಂತರ್ಜಾತಿ ವಿವಾಹ

ದನಗಳ ಅಕ್ರಮ ಸಾಗಾಟ ಪತ್ತೆ

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಗೆ ಹೊರಟ ಕಾರ್ಯಕರ್ತರು

ಸೆಪ್ಟೆಂಬರ್‌ಗೆ ಪ್ರಾದೇಶಿಕ ಅಸಮತೋಲನಾ ನಿವಾರಣಾ ಸಮಿತಿ ವರದಿ

April 19, 2025

Ctv News Kannada

Chikkaballapura

ಪರಿಸರ ಉಳಿಸಿ, ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದ ನ್ಯಾಯಾಧೀಶರು

1 min read

ಕಾನೂನು ಸೇವಾ ಸಮಿತಿಯಿಂದ ಗಿಡ ನೆಡುವ ಕಾರ್ಯಕ್ರಮ
101 ಗಿಡ ನೆಡುವ ಕಾರ್ಯಕ್ರಮಕ್ಕೆ ನ್ಯಾಯಾಧೀಶರಿಂದ ಚಾಲನೆ
ಪರಿಸರ ಉಳಿಸಿ, ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದ ನ್ಯಾಯಾಧೀಶರು

ಗಿಡ ಮರಗಳು ಪರಿಸರದ ಜೀವನಾಡಿಗಳು, ಪರಿಸರದ ಸಮತೋಲನ ಕಾಪಾಡಲು ಎಲ್ಲೆಡೆ ಗಿಡ ಮರಗಳನ್ನು ಬೆಳೆಸುವ ಪರಿಪಾಠ ಬೆಳೆಸಬೇಕಾಗಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಪೂಜಾ.ಜೆ ತಿಳಿಸಿದರು.

ಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ಮಳ್ಳೂರಾಂಭ ದೇವಾಲಯದ ಆವರಣದಲ್ಲಿ ಭಾನುವಾರ ತಾಲ್ಲೂಕು ಕಾನೂನು ಸೇವಾ ಸಮಿತಿಯಿಂದ ಆಯೋಜಿಸಿದ್ದ 101 ಗಿಡ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಶಿಡ್ಲಘಟ್ಟ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಪೂಜಾ.ಜೆ ಅವರು, ಪ್ರಕೃತಿ ನಮಗೆ ಯಾವುದೇ ಪ್ರತಿಭಲಾಪೇಕ್ಷೆ ಇಲ್ಲದೆ ಶುದ್ಧ ನೀರು, ಗಾಳಿ, ಆಹಾರ ಸೇರಿದಂತೆ ಅನೇಕ ಅಗತ್ಯ ವಸ್ತುಗಳನ್ನು ನೀಡುತ್ತಿದೆ. ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸ್ವ ಇಚ್ಛೆಯಿಂದ ಗಿಡ, ಮರಗಳನ್ನು ಬೆಳೆಸಿ, ಪರಿಸರ ಸಂರಕ್ಷಿಸಬೇಕೆoದು ಹೇಳಿದರು.

ಪ್ರಕೃತಿಯಲ್ಲಿನ ಏರುಪೇರುಗಳಿಂದ ಭೂಮಿ ತಾಪಮಾನ ಹೆಚ್ಚಾಗಿದ್ದು, ಅದರಿಂದ ಪ್ರಾಕೃತಿಕ ಅಸಮತೋಲನ ಏರ್ಪಟ್ಟಿದೆ. ತಾಪಮಾನ ನಿಯಂತ್ರಿಸಿ, ಪರಿಸರದ ಸಮತೋಲನ ಕಾಯ್ದುಕೊಳ್ಳಲು ಪ್ರತಿಯೊಬ್ಬರೂ ಮರಗಿಡಗಳನ್ನು ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು ಭಾವಿಸಿ ಕಾಡನ್ನು ಉಳಿಸಿ, ಬೆಳೆಸಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ವಕೀಲರಾದ ವಿ.ಸುಭ್ರಮಣ್ಯಪ್ಪ, ಮುನಿರಾಜಗೌಡ, ಅಮೂಲ್ಯ, ಗ್ರಾಮ ಪಂಚಾಯಿತಿ ಸದಸ್ಯರಾದ ಎನ್.ವೆಂಕಟೇಶ್, ಎನ್.ರಾಜಣ್ಣ, ವಿ.ವೇಣುಗೋಪಾಲ್, ಬಿ.ಎಲ್.ಮುನಿರಾಜು, ವೆಂಕೋಬರಾವ್, ಎನ್, ವೆಂಕಟೇಶ್, ರಾಕೇಶ್, ಶ್ರೀ ರಾಮ, ಅರಣ್ಯ ಇಲಾಖೆಯ ಕೆ.ಆನಂದ್ ಹಾಜರಿದ್ದರು.

About The Author

Leave a Reply

Your email address will not be published. Required fields are marked *