ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಆಕ್ರೋಶ

ನಾಳೆ ನಡೆಲಿದೆಯೇ ನಗರಸಭೆ ಅಂಗಡಿಗಳ ಹರಾಜು

ಊರದೇವತೆ ಜಾಲಾರಿ ಗಂಗಮಾAಬದೇವಿ ಕರಗಮಹೋತ್ಸವ

ಚಿಕ್ಕಕಾಡಿಗೇನಹಳ್ಳಿಯಲ್ಲಿ ಅದ್ಧೂರಿ ಅಂಬೇಡ್ಕರ್ ಜಯಂತಿ

April 17, 2025

Ctv News Kannada

Chikkaballapura

ಎರಡನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರಿಗಳ ಧರಣಿ

1 min read

ಎರಡನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರಿಗಳ ಧರಣಿ

ಮೂಲ ಸೌಕರ್ಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ

ಕೆಲಸದ ಒತ್ತಡ ಕಡಿಮೆ ಮಾಡಲು ಒತ್ತಾಯ

ಕೆಲಸದ ಒತ್ತಡ ಹೆಚ್ಚಾಗುತ್ತಿರುವುದನ್ನ ಕಡಿಮೆ ಮಾಡುವುದು, ಅಗತ್ಯ ಸೌಲಭ್ಯಗಳ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿ¯್ಲÁಡಳಿತ ಭವನದ ಎದುರು ಕಂದಾಯ ಅಧಿಕಾರಿಗಳು ಅನಿರ್ದಿಷ್ಟಾವಧಿ ಮುಷ್ಕರ ೨ನೇ ದಿನಕ್ಕೆ ಕಾಲಿಟ್ಟಿದೆ.

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂದೆ ಮುಷ್ಕರ ಕೈಗೊಂಡಿರುವ ಗ್ರಾಮ ಆಡಳಿತಾಧಿಕಾರಿಗಳು ತಮ್ಮ ಮೇಲೆ ನಿರಂತರವಾಗಿ ಸರ್ಕಾರ ಕೆಲಸದ ಒತ್ತಡ ಹೇರುತ್ತಿರುವುದರಿಂದ ಒತ್ತಡ ಹೆಚ್ಚಾಗಿ ಅಧಿಕಾರಿಗಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೇ ಮೂಲ ಸೌಕರ್ಯಗಳ ಕಲ್ಪಿಸದೇ ಕೆಲಸದ ಒತ್ತಡ ಹೇರುತ್ತಿದ್ದರೆ ಕೆಲಸ ಮಾಡುವುದಾದರೂ ಹೇಗೆ. ಎಲ್ಲವೂ ಸ್ವಂತ ಹಣದಲ್ಲೆ ಖರ್ಚು ಮಾಡಿಕೊಂಡು ಸಾರ್ವಜನಿಕರ ಕೆಲಸ ಮಾಡಬೇಕಾಗಿದೆ. ಅಗತ್ಯ ಸೌಲಭ್ಯಗಳಿಲ್ಲದೇ ನಿರಂತರವಾಗಿ ಕೆಲಸ ಮಾಡಿದರೆ ಹೇಗೆ, ಜೊತೆಗೆ ರಜಾ ದಿನಗಳಲ್ಲೂ ಕೆಲಸದ ಒತ್ತಡ ಹೇರುತ್ತಿರುವುದರಿಂದ ಅಧಿಕಾರಿಗಳು ಮಾನಸಿಕವಾಗಿ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಅಲ್ಲದೇ ಕೌಟುಂಬಿಕ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆಂದು ಅಧಿಕಾರಿಗಳು ದೂರಿದರು.

ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ, ಸರ್ಕಾರ ಕಂದಾಯ ಅಧಿಕಾರಿಗಳ ಮೇಲೆ ಒತ್ತಡ ಹೇರುವುದನ್ನು ಕಡಿಮೆ ಮಾಡುವುದರ ಜೊತೆಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕೆಂದು ಆಗ್ರಹಿಸಿದರು.

ಲ್ಯಾಪ್ಟಾಪ್ ಕಂಪ್ಯೂಟರ್ ಸೌಲಭ್ಯವಿಲ್ಲ, ಕೂರಲು ಚೇರ್ ಇಲ್ಲ, ಸರಿಯಾದ ವ್ಯವಸ್ಥೆ ಇಲ್ಲ, ಹಾಗಾಗಿ ನಾವು ಜಿಲ್ಲೆಧಿಕಾರಿಗಳ ಕಚೇರಿ ಮುಂದೆ ಧರಣಿಗೆ ಕೂಳಿದುಕೊಂಡಿದ್ದೇವೆ ಎಂದು ಅಳಲು ತೋಡಿಕೊಂಡರು.

ಒಟ್ಟಾರೆಯಾಗಿ ಮೂಲ ಸೌಕರ್ಯಗಳಿಗೆ ಹಾಗೂ ಬೇಡಿಕೆಗಳು ಸಿಗೋವರೆಗೂ ಈ ಧರಣಿ ನಿಲ್ಲೋದ್ದಿಲ್ಲ ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ತಿಳಿಸಿದರು.

About The Author

Leave a Reply

Your email address will not be published. Required fields are marked *